ಬಿ.ಎಸ್ಸಿ. ನರ್ಸಿಂಗ್ ಉಳಿಕೆ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೋಮವಾರ ಸಂಜೆ 5 ಗಂಟೆಗೆ ಈ ಬಗ್ಗೆ ಜಿಲ್ಲಾ ಸರ್ಜನ್ ಡಾ.ಎಸ್.ಪಿ.ರವೀಂದ್ರ ಅವರು ಪ್ರಕಟಣೆ ನೀಡಿದ್ದಾರೆ. ಇನ್ನೂ ಚಿತ್ರದುರ್ಗ ಸರ್ಕಾರಿ ಬಿಎಸ್ಸಿ ನರ್ಸಿಂಗ್ ಕಾಲೇಜಿನಲ್ಲಿ ಭರ್ತಿಯಾಗದೆ ಉಳಿದಿರುವ 28 ಸೀಟುಗಳಿಗೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ನೋಂದಾಯಸಿದ, ಹಾಗೂ ಸಿ.ಇ.ಟಿ ನೋಂದಣಿ ಸಂಖ್ಯೆ ಹೊಂದಿರುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.