ಬೆಂಗಳೂರು ಉತ್ತರ: ಸೌಜನ್ಯ ಪ್ರಕರಣ ಮರು ತನಿಖೆ ಆಗಬೇಕು ಇದು ನನ್ನ ಆಗ್ರಹ: ನಗರದಲ್ಲಿ ಹರೀಶ್ ಪೂಂಜ
ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿ ನಾನು ನಿನ್ನೆ ಸದನದಲ್ಲಿ ವಿನಂತಿ ಮಾಡಿದ್ದೆ ಎಂದು ಬಿಜೆಪಿ ಶಾಸಕ ಹರೀಶ್ ಪೂಂಜ ಅವರು ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ನಿನ್ನೆ ಸದನದಲ್ಲಿ ಸರಕಾರಕ್ಕೆ ವಿನಂತಿ ಮಾಡಿದ್ದೆ, ಸೌಜನ್ಯ ಪ್ರಕರಣವನ್ನು ಮರು ತನಿಖೆಮಾಡಬೇಕು ಎನ್ನುವುದು ನನ್ನ ಆಗ್ರಹ.ಆದರೆ ಸರಕಾರ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ಎಸ್ ಐಟಿ ತನಿಖೆ ಆದಷ್ಟು ಬೇಗ ಮುಗಿಸಿ. ರಾಜ್ಯದ ಜನತೆಯ ಮುಂದೆ ಇಡಬೇಕು ಎಂದರು. ಧರ್ಮಸ್ಥಳ ಪ್ರಕರಣದಲ್ಲಿ ಸಂಸದ ಸೆಂಥಿಲ್ ಕೈವಾಡ ಇದೆ ಎಂಬ ಆರೋಪಕ್ಕೆ ಸಂಬಂಧಿಸಿ ಮಾತನಾಡಿ, ಇಂತಹ ಊಹಪೋಹ ಬಗ್ಗೆ ನಾನು ಏನು ಹೇಳಲ್ಲ. ಷಡ್ಯಂತ್ರದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.