ಸಿಂದಗಿ: ಸಿಂದಗಿ:ಬ್ಯಾಕೋಡ ಗ್ರಾಮದಲ್ಲಿ ಮುತೈದೆಯರಿಗೆ ಉಡಿತುಂಬುವ ಕಾರ್ಯಕ್ರಮ ಜರುಗಿತು.
ಸಿಂದಗಿ ತಾಲೂಕಿನ ಬ್ಯಾಕೋಡ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಶ್ರೀ ಬಸವಲಿಂಗ ಶಿವಾಚಾರ್ಯರ ನೂತನವಾಗಿ ನಿರ್ಮಿಸಿದ ಹಿರೇಮಠದ ಲೋಕಾರ್ಪಣೆ , ಶಿಖರಕ್ಕೆ ಕಳಸಾರೋಹಣ ಕಾರ್ಯಕ್ರಮದ ನಿಮಿತ್ತ 501 ಮುತೈದೆಯರಿಗೆ ಉಡಿತುಯಂಬುವ ಕಾರ್ಯಕ್ರಮ ಜರುಗಿತು. ಸಾರಂಗಮಠ-ಗಚ್ಚಿನಮಠದ ಗುರುಕುಲ ಭಾಸ್ಕರ ಪಂಚಾಚಾರ್ಯಶ್ರೀ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಕೊಟ್ಟೂರದ ಶ್ರೀ ಡಾ.ಸಿದ್ಧಲಿಂಗ ಶಿವಾಚಾರ್ಯರು, ಕೊಣ್ಣೂರ ಕಲ್ಯಾಣನಮಠದ ಶ್ರೀ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಸಾನಿಧ್ಯದಲ್ಲಿ ಮುತೈದೆಯರಿಗೆ ಉಡಿತುಂಬುವ ಕಾರ್ಯಕ್ರಮ ಜರುಗಿತು. ನಂತರ ಅನ್ನಪ್ರಸಾದ ಜರುಗಿತು. ಗ್ರಾಮದ ಹಿರಿಯರು, ಯುವಕರು, ಮಹಿಳೆಯರು ಭಾಗವಹಿಸಿದ್ದರು.