ಹುಬ್ಬಳ್ಳಿ ಧಾರವಾಡ ಅವಳಿ ನಗರದ ವಿವಿಧ ಪ್ರದೇಶಗಳಲ್ಲಿ ಪಾಲಿಕೆಯ ಅಧಿಕಾರಿಗಳು ತೀವ್ರ ತಪಾಸಣೆ ನಡೆಸಿ, ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯ ಕುರಿತು ವ್ಯಾಪಕ ತಿಳುವಳಿಕೆ ಕಾರ್ಯಕ್ರಮ ಆಯೋಜಿಸಿದರು. ವ್ಯಾಪಾರಿಗಳಿಗೆ ಟ್ರೇಡ್ ಲೈಸೆನ್ಸ್ ಕಡ್ಡಾಯವಾಗಿ ಪಡೆಯಬೇಕೆಂಬುದನ್ನು ಹೇಳುವುದರ ಜೊತೆಗೆ ಯೂಸರ್ ಫೀಸ್ ಸಕಾಲದಲ್ಲಿ ಪಾವತಿಸುವ ಮಹತ್ವವನ್ನು ತಿಳಿಸಲಾಯಿತು.ಹಸಿ ಕಸ ಮತ್ತು ಒಣ ಕಸವನ್ನು ಬೇರ್ಪಡಿಸಿ ವಿಲೇವಾರಿ ಮಾಡುವ ನಿಯಮ, ರಸ್ತೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡುವ ಜವಾಬ್ದಾರಿ ಹಾಗೂ ರ ಏಕಬಾರಿ ಬಳಕೆಯ ಪ್ಲಾಸ್ಟಿಕ್ ಚೀಲಗಳು ಮತ್ತು ಪ್ಲಾಸ್ಟಿಕ್ ಗ್ಲಾಸ್ಗಳ ಸಂಪೂರ್ಣ ನಿಷೇಧದ ಬಗ್ಗೆ ವಿವರವಾಗಿ ಮಾಹಿತಿ ನೀಡಲಾಯಿತು.