ಚಾಮರಾಜನಗರ ಲೋಕಸಭಾ ಚುನಾವಣೆ ಅಂಗವಾಗಿ ಎಚ್.ಡಿ. ಕೋಟೆ ಕ್ಷೇತ್ರಕ್ಕೆ ಒಳಪಡುವ ಕ್ಯಾತನಹಳ್ಳಿ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿ ಭಾನುವಾರ ಮಧ್ಯಾಹ್ನ ಮೂರರ ಸಮಯದಲ್ಲಿ ಶಾಸಕ ಅನಿಲ್ ಚಿಕ್ಕಮಾದು ಚುನಾವಣಾ ಪ್ರಚಾರ ಸಭೆ ನಡೆಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಅವರ ಪರ ಮತಯಾಚನೆ ಮಾಡಿ ಗೆಲುವಿಗಾಗಿ ಶ್ರಮಿಸುವಂತೆ ಕೋರಿದರು. ಕಾಂಗ್ರೆಸ್ ಬಡವರ ಪರ ಇರುವ ಸರ್ಕಾರ, ಸಮಾಜವಾದಿ ತತ್ವವನ್ನು ಅಳವಡಿಸಿಕೊಂಡಿರುವ ಸರ್ಕಾರ, ಬಿಜೆಪಿ ಯಾವುದೇ ಜನಪರ ಕೆಲಸಗಳನ್ನು ಮಾಡಿಲ್ಲ,ಕಾಂಗ್ರೆಸ್ ಜನಪರ ಕೆಲಸಗಳಾದ ಆಹಾರ ಭದ್ರತೆ ಕಾಯ್ದೆ,ಮಾಹಿತಿ ಹಕ್ಕು ಕಾಯ್ದೆ,ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಕಾಯ್ದೆ ಸೇರಿದಂತೆ ಹಲವಾರು ಜನಪರ ಕೆಲಸಗಳನ್ನು ಕಾಂಗ್ರೆಸ್ ಮಾಡಿದೆ ಎಂದು ತಿಳಿಸಿದರು.