ಯಲ್ಲಾಪುರ: ಪಟ್ಟಣದ ಕಾಳಮ್ಮನಗರದಲ್ಲಿ ಯಲ್ಲಾಪುರ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ “ಎನ್.ವಿ.ಎಸ್ ವೈ.ಪಿ.ಎಲ್” ಕ್ರಿಕೆಟ್ ಟೂರ್ನಮೆಂಟ್ನ ಫೈನಲ್ ಪಂದ್ಯಾವಳಿಯಲ್ಲಿಕಿರಾವತ್ತಿಯ ಎಸ್ ಜೆ ರಾಕರ್ಸ್ ತಂಡ ಚಾಂಪಿಯನ್ ಆಗಿದೆ. ಇದಕ್ಕೂ ಮುನ್ನ ಕಾರ್ಯಕ್ರಮದಲ್ಲಿ ಶಾಸಕ ಶಿವರಾಮ ಹೆಬ್ಬಾರ್ ಭಾಗವಹಿಸಿ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಎರಡೂ ತಂಡಗಳ ಆಟಗಾರರಿಗೆ ಶುಭಹಾರೈಸಿದ ಶಾಸಕರು, ಕೆಲ ಸಮಯ ಪಂದ್ಯಾವಳಿಯನ್ನು ವೀಕ್ಷಿಸಿದರು. ಸೋಮವಾರ ರಾತ್ರಿ ಜಿ ಪಂ ಮಾಜಿ ಸದಸ್ಯ ವಿಜಯ ಮಿರಾಶಿ ನೇತೃತ್ವದಲ್ಲಿ ವಿಜಯೋತ್ಸವ ನಡೆಯಿತು.