ರಾಗಿ ಖರೀದಿ ನೋಂದಣಿ ಮುಂದುವರೆಸುವಂತೆ ರೈತರ ಆಗ್ರಹ ದೊಡ್ಡಬಳ್ಳಾಪುರ : ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗೆ ರೈತರ ನೋಂದಣಿ ಮುಕ್ತಾಯವಾಗಿರುವದರಿಂದ ರಾಗಿ ಬೆಳೆದಿರುವ ರೈತರಿಗೆ ಅನಾನುಕೂಲವಾಗಲಿದ್ದು, ಕೂಡಲೇ ಸರ್ಕಾರ ರಾಗಿ ಖರೀದಿ ನೋಂದಣಿ ದಿನಾಂಕವನ್ನು ವಿಸ್ತರಿಸಬೇಕು ಹಾಗೂ ಇದಕ್ಕೆ ಪೂರಕವಾಗಿ ರಾಗಿ ಖರೀದಿ ಗುರಿ ಏರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಗರದ ಎಪಿಎಂಸಿ ಎಪಿಎಂಸಿ ಖರೀದಿ ಕೇಂದ್ರದ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ ಮಾತನಾಡಿ, ರಾಜ್ಯದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಿ