ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಹಾಗೂ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ನೂರಾರು ಕಾರ್ಯಕರ್ತೆಯರು ನಗರದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಛೇರಿ ಬಳಿ ಪ್ರತಿಭಟನೆ ನಡೆಸಿದರು. ಶಾಲೆಗಳು ವಿಲೀನವಾದಾಗ ನೌಕಕರಿಗೆ ಕೆಲಸದ ಭದ್ರತೆ ಖಚಿತಪಡಿಸಬೇಕು, ಆಹಾರ, ಆರೋಗ್ಯ, ಶಿಕ್ಷಣ ಹಕ್ಕಾಗಲಿ, ಮಕ್ಕಳಿಗೆ ಸ್ಥಳೀಯ ಆಹಾರ ಪದಾರ್ಥಗಳನ್ನು ನೀಡಬೇಕು, ಬಿಸಿಯೂಟ ನೌಕರರನ್ನು ೪ ನೇ ದರ್ಜೆಗೆ ನೌಕರರನ್ನಾಗಿ ಪರಿಗಣಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಲಾಯಿತು..