ಶಿರಸಿ: ರಾಜ್ಯ ಸರ್ಕಾರದ ಆಡಳಿತ ತುರ್ತು ಪರಿಸ್ಥಿತಿಗಿಂತ ಭಿನ್ನವಾಗಿಲ್ಲ : ದೀನದಯಾಳ ಭವನದಲ್ಲಿ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್
ಶಿರಸಿ : ರಾಜ್ಯದ ಈಗಿನ ಕಾಂಗ್ರೆಸ್ ಸರ್ಕಾರದ ಆಡಳಿತ ಇಂದಿರಾ ಗಾಂಧಿಯವರ ತುರ್ತು ಪರಿಸ್ಥಿತಿಗಿಂತ ಭಿನ್ನವಾಗಿಲ್ಲ ಎಂದು ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಹೇಳಿದರು. ೧೯೭೫ರಲ್ಲಿ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ಹೇರಿ ಇಂದಿಗೆ ೫೦ ವರ್ಷಗಳು ಸಂದ ಹಿನ್ನೆಲೆಯಲ್ಲಿ ನಗರದ ದೀನದಯಾಳ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಕರಾಳ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಇಂದಿರಾ ಗಾಂಧಿಯವರು ಪ್ರಧಾನಿಯಾಗಿದ್ದಾಗ ಪ್ರಜಾಪ್ರಭುತ್ವದ ಮೇಲೆ ದರ್ಪ ತೋರಿ ತುರ್ತು ಪರಿಸ್ಥಿತಿ ಘೋಷಿಸಿದ್ದರು. ಈಗ ಅದೇ ರೀತಿ ಆಡಳಿತ ರಾಜ್ಯದಲ್ಲಿದೆ ಎಂದು ಅಭಿಪ್ರಾಯ ಪಟ್ಟರು.