ರಾಯಚೂರು ನಗರದಲ್ಲಿ ಬಹುನಿರೀಕ್ಷಿತ ನೂತನ ಸಿದ್ದರಾಮೇಶ್ವರ ಬಡಾವಣೆ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಬದ್ಧವಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬೈರತಿ ಸುರೇಶ್ ಬುಧವಾರ 1 ಗಂಟೆಗೆ ತಿಳಿಸಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಡಿಸೆಂಬರ್ 3ರಂದು ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡುತ್ತಾ, ಸಿದ್ದರಾಮೇಶ್ವರ ಬಡಾವಣೆಯನ್ನು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಕಡತವನ್ನು ಕೇಂದ್ರ ಕಚೇರಿಗೆ ಕಳುಹಿಸಿದರೆ ಕೂಡಲೇ ಅನುಮೋದನೆ ನೀಡಲಾಗುತ್ತದೆ ಎಂದರು.