ರಾಜಕಾಲುವೆ ಒತ್ತುವರಿ ತೆರವಿಗೆ ಡಿಸಿ ಖಡಕ್ ಸೂಚನೆ ಪಟ್ಟಣದ ಹಲವು ವರ್ಷಗಳ ಜ್ವಲಂತ ಸಮಸ್ಯೆಯಾಗಿರುವ ರಾಜಕಾಲುವೆ ಒತ್ತುವರಿ ಹಾಗೂ ಹದಗೆಟ್ಟಿರುವ ರಸ್ತೆಗಳ ದುರಸ್ತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ರವಿ ರವರು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶ್ರೀನಿವಾಸಪುರ ಪಟ್ಟಣದ ಎಸ್ಎಫ್ ಶಾಲೆ ಮುಂಭಾಗವಿರುವ ರಾಜಕಾಲುವೆ, ರೈಲ್ವೆ ಅಂಡರ್ ಪಾಸ್ ಹಾಗೂ ಕಟ್ಟೆ ಕೆಳಗಿನ ಪಾಳ್ಯದ ರಸ್ತೆಗಳಿಗೆ ಮಂಗಳವಾರ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ರಾಜಕಾಲುವೆ ಒತ್ತುವರಿಯಿಂದಾಗಿ ಮಳೆಗಾಲದಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳನ್ನು ಗಮನಿಸಿದ ಅವರು, ತಕ್ಷಣವೇ ಸರ್ವೆ ಕಾರ್ಯ ನಡೆಸಿ ಒತ್ತುವರಿ ತೆರವುಗೊಳಿಸಲ