ಹುಬ್ಬಳ್ಳಿ ನಗರ: ಗಣೇಶ ವಿಸರ್ಜನೆಗೆ ತೊಂದರೆಯಾಗದಂತೆ ಪೊಲೀಸ್ ಬಿಗಿ ಬಂದೋಬಸ್ತ್ : ನಗರದಲ್ಲಿ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿಕೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ಹಿನ್ನೆಲೆ ಸುಮಾರು 3000, ಅಧಿಕಾರಿ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಗಣೇಶನ ವಿಸರ್ಜನೆಯನ್ನು ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಅದ್ದೂರಿಯಾಗಿ ಮಾಡಲಾಗುತ್ತದೆ. ಹುಬ್ಬಳ್ಳಿಯಲ್ಲಿ ಸುಮಾರು ಎರಡು ಲಕ್ಷಕ್ಕೂ ಅಧಿಕ ಜನ ಹಾಗೂ ಧಾರವಾಡದಲ್ಲಿ 70 ಸಾವಿರ ಜನ ಸೇರ್ವ ನಿರೀಕ್ಷೆ ಇದೆ ಎಂದು ಪೊಲೀಸ್ ಕಮಿಷನರ್ ಹೇಳಿದರು.