ಧಾರವಾಡದ ಲಿಂಗಾಯತ ಭವನದಲ್ಲಿ ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದಿಂದ ನಡೆದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರು ಮಾತನಾಡಿ, ಸಾಧಕ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಬಣಜಿಗ ಸಮಾಜದ ಕಾರ್ಯ ಶ್ಲಾಘನೀಯ ಎಂದರು. ಸಾಧಕ ವಿದ್ಯಾರ್ಥಿಗಳು ಉನ್ನತ ಕನಸು ಕಂಡು ದೇಶದ ಆಸ್ತಿಯಾಗಬೇಕು ಎಂದು ಕರೆ ನೀಡಿದರು. ಸಮಾಜ ಸಂಘಟಿತವಾಗಿ ಪ್ರಗತಿಯತ್ತ ಸಾಗಬೇಕು ಹಾಗೂ ಪ್ರತಿಯೊಬ್ಬರೂ ಸಮಾಜಕ್ಕೆ ತಮ್ಮ ಕೊಡುಗ