ದಾಂಡೇಲಿ: ಕುಸ್ತಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಇ.ಎಂ.ಎಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಹರ್ಷಲ್ ಸಂಜೀವ್ ಮುನಿಸ್ವಾಮಿ
ದಾಂಡೇಲಿ : ಸಾರ್ವಜನಿಕ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ನಡೆದ 14 ವರ್ಷ ವಯೋಮಿತಿಯೊಳಗಿನ ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಕೆನರಾ ವೆಲ್ಪೇರ್ ಟ್ರಸ್ಟಿನ ನಗರದ ಇ.ಎಂ.ಎಸ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಹರ್ಷಲ್ ಸಂಜೀವ್ ಮುನಿಸ್ವಾಮಿ ಈತನು ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ, ತಾಲೂಕಿಗೆ ಮತ್ತು ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾನೆ. ಈ ಬಗ್ಗೆ ಬುಧವಾರ ಸಂಜೆ 7:30 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ಈತನು ದಾಂಡೇಲಿಯ ಸುಭಾಷ್ ನಗರದ ನಿವಾಸಿ ಸಂಜೀವ್ ಮುನಿಸ್ವಾಮಿಯವರ ಸುಪುತ್ರನಾಗಿದ್ದಾನೆ. ಈತ ಹಳಿಯಾಳದ ಕುಸ್ತಿ ವಸತಿ ಶಾಲೆಯಲ್ಲಿ ಕುಸ್ತಿ ತರಬೇತಿಯನ್ನು ಪಡೆಯುತ್ತಿದ್ದಾನೆ.