ಧಾರವಾಡ: 72 ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಧಾರವಾಡ ಜಿಲ್ಲಾ ಸಹಕಾರ ಯೂನಿಯನ್ ನಿ., ಧಾರವಾಡ ಶ್ರೀ ಲಕ್ಷ್ಮೀ ಮಹಿಳಾ ಪತ್ತಿನ ಸಹಕಾರ ಸಂಘ ನಿ., ಧಾರವಾಡ ಹಾಗೂ ಸಹಕಾರ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ "ಸಹಕಾರಿ ಉದ್ಯಮ ಶೀಲತೆಯಿಂದ ಯುವಜನ , ಮಹಿಳಾ ಮತ್ತು ಅಬಲ ವರ್ಗದ ಸಬಲೀಕರಣ " ಕಾರ್ಯಕ್ರಮವನ್ನು ಹುಧಾಮಪಾ ಮೇಯರ್ ಜ್ಯೋತಿ ಪಾಟೀಲ್ ಅವರು ಉದ್ಘಾಟಿಸಿ ಮಾತನಾಡಿದರು. ಈ ವೇಳೆಯಲ್ಲಿ ಡಾ.ರೇಣುಕಾ.ಸಾಳುಂಕೆ , ಶ್ರೀಮತಿ ಪ್ರಿಯಾ.ಕೋದಾನಪುರ, ಶ್ರೀಮತಿ ಗೀತಾ.ಎಸ್.ಕುಂಬಿ , ಬಾಪುಗೌಡ.ಪಾಟೀಲ ಸೇರಿದಂತೆ ಉಪಸ್ಥಿತರಿದ್ದರು.