Public App Logo
Jansamasya
News
पुलिस
Bjp
National
Bihar
बिहार
बीजेपी
विधायक
Congress
Modi
Delhi
Viral
Crime
Odisha
Rajasthan
अमित_शाह
दिल्ली
Breakingnews
Madhya_pradesh
Pmmodi
Ipl
Rahulgandhi
Haryana
Cricket
तेजस्वी_यादव
शादी
Crimenews
Kolkata
Aap

ಯಲ್ಲಾಪುರ: ಯಲ್ಲಾಪುರದಲ್ಲಿ ಪರ್ತಗಾಳಿ ಜೀವೋತ್ತಮ ಮಠದ ಶ್ರೀರಾಮ ದಿಗ್ವಿಜಯ ರಥಕ್ಕೆ ಅದ್ದೂರಿ ಸ್ವಾಗತ

ಯಲ್ಲಾಪುರ :ಪಟ್ಟಣಕ್ಕೆ ಮಂಗಳವಾರ ಸಂಜೆ ಆಗಮಿಸಿದ ಪರ್ತಗಾಳಿ ಜೀವೋತ್ತಮ ಮಠದ ಶ್ರೀರಾಮ ದಿಗ್ವಿಜಯ ರಥವನ್ನು ಗ್ರಾಮದೇವಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠವು ಸ್ಥಾಪನೆಯಾಗಿ 550 ವರ್ಷಗಳನ್ನು ಪೂರೈಸಿದ ಸವಿನೆನಪಿನಲ್ಲಿ ಸಂಸ್ಥಾನದ ಆರಾಧ್ಯ ದೇವತೆಯಾದ ಶ್ರೀರಾಮ ದೇವರ 77 ಅಡಿ ಎತ್ತರದ ಕಂಚಿನ ಪ್ರತಿಮೆ ಪರ್ತಗಾಳಿಯಲ್ಲಿ ಅನಾವರಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಬದರಿಕಾಶ್ರಮದಿಂದ ಹೊರಟ ಭವ್ಯವಾದ ಪರ್ತಗಾಳಿ ಜೀವೋತ್ತಮ ಮಠದ ಶ್ರೀರಾಮ ದಿಗ್ವಿಜಯ ರಥವು ಹಲವು ರಾಜ್ಯಗಳನ್ನು ಸಂಚರಿಸಿ, ಮಂಗಳವಾರ ಸಂಜೆ ಯಲ್ಲಾಫುರಕ್ಕೆ ಆಗಮಿಸಿದ್ದ ರಥಕ್ಕೆ ಗ್ರಾಮದೇವಿ ದೇವಸ್ಥಾನ ಬಳಿ ಅದ್ದೂರಿಯಾಗಿ ಸ್ವಾಗತಿಸಿದರು.