ಯಲ್ಲಾಪುರ :ಪಟ್ಟಣಕ್ಕೆ ಮಂಗಳವಾರ ಸಂಜೆ ಆಗಮಿಸಿದ ಪರ್ತಗಾಳಿ ಜೀವೋತ್ತಮ ಮಠದ ಶ್ರೀರಾಮ ದಿಗ್ವಿಜಯ ರಥವನ್ನು ಗ್ರಾಮದೇವಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠವು ಸ್ಥಾಪನೆಯಾಗಿ 550 ವರ್ಷಗಳನ್ನು ಪೂರೈಸಿದ ಸವಿನೆನಪಿನಲ್ಲಿ ಸಂಸ್ಥಾನದ ಆರಾಧ್ಯ ದೇವತೆಯಾದ ಶ್ರೀರಾಮ ದೇವರ 77 ಅಡಿ ಎತ್ತರದ ಕಂಚಿನ ಪ್ರತಿಮೆ ಪರ್ತಗಾಳಿಯಲ್ಲಿ ಅನಾವರಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಬದರಿಕಾಶ್ರಮದಿಂದ ಹೊರಟ ಭವ್ಯವಾದ ಪರ್ತಗಾಳಿ ಜೀವೋತ್ತಮ ಮಠದ ಶ್ರೀರಾಮ ದಿಗ್ವಿಜಯ ರಥವು ಹಲವು ರಾಜ್ಯಗಳನ್ನು ಸಂಚರಿಸಿ, ಮಂಗಳವಾರ ಸಂಜೆ ಯಲ್ಲಾಫುರಕ್ಕೆ ಆಗಮಿಸಿದ್ದ ರಥಕ್ಕೆ ಗ್ರಾಮದೇವಿ ದೇವಸ್ಥಾನ ಬಳಿ ಅದ್ದೂರಿಯಾಗಿ ಸ್ವಾಗತಿಸಿದರು.