: ಮುಂಡಗೋಡ: ಪಟ್ಟಣದ ಕಿಲ್ಲೆ ಓಣಿಯಲ್ಲಿ ಇರುವ ವುಡ್ ಫರ್ನಿಚರ್ ತಯಾರಿಕಾ ಘಟಕದಲ್ಲಿ ಇಂದು ಸಂಭವಿಸಿದ ಅಗ್ನಿ ಅವಘಡದ ಸ್ಥಳಕ್ಕೆ ಶಾಸಕ ಹೆಬ್ಬಾರ್ ಭೇಟಿ ನೀಡಿದರು ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳು ಮತ್ತು ಸ್ಥಳೀಯ ಮುಖಂಡರೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿದರು. ಘಟಕದ ಹಾನಿಗೊಳಗಾದ ಭಾಗಗಳನ್ನು ಅವಲೋಕಿಸಿ ಮಾಲಿಕರಿಗೆ ಧೈರ್ಯ ತುಂಬಿ, ಸರಕಾರರಿಂದ ಸೂಕ್ತ ಪರಿಹಾರವನ್ನು ಒದಗಿಸುವ ಭರವಸೆಯನ್ನು ನೀಡಿದರು.