ಹುಬ್ಬಳ್ಳಿ: ಅಪ್ರಬುದ್ಧ ರಾಜಕಾರಣಿ ರಾಹುಲ್ ಗಾಂಧಿ ಮುಂದೆ ಕೈಕಟ್ಟಿ ನಿಲ್ಲುವವರು ನಮಗೆ ಬುದ್ದಿ ಹೇಳಲು ಹೊರಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೊತ್ತಿಲ್ಲದೇ ಏನೇನೋ ಮಾತನಾಡುವುದಲ್ಲ. ಎಲ್ಲ ಪೂರ್ವಾಪರ ದಾಖಲೆಗಳನ್ನು ನೋಡಿಕೊಂಡು ಮಾತನಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.