ಹುಬ್ಬಳ್ಳಿ ನಗರ: ನಗರದಲ್ಲಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್ ಕಾರ್ಯಕರ್ತರನ್ನ ವಶಕ್ಕೆ ಪಡೆದು ಬಿಡುಗಡೆಗೊಳಿಸಿದ ಪೊಲೀಸರು
ಹುಬ್ಬಳ್ಳಿಯಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ, ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಗೆ ನ್ಯಾಯಾಲಯದಿಂದ ಕ್ಲೀನ್ ಚೀಟಿ ದೊರೆತಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಪಕ್ಷದಿಂದ ಹುಬ್ಬಳ್ಳಿಯ ಅರವಿಂದ ನಗರದಲ್ಲಿರುವ ಬಿಜೆಪಿ ಕಚೇರಿಗೆ ಗುರುವಾರ ಮುತ್ತಿಗೆ ಹಾಕಿ ಪ್ರತಿಭಟನೆ ಮುಂದಾದ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದು ಬಿಡುಗಡೆಗೊಳಿಸಿದರು.