ಭ್ರಷ್ಟಾಚಾರ ವಿರುದ್ಧ ಜನರು ಜಾಗೃತರಾಗಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು. ನಗರದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಸೋಮವಾರ ಆಯೋಜಿಸಿದ್ದ ಜಾಗೃತಿ: ನಮ್ಮ ಒಟ್ಟು ಜವಾಬ್ದಾರಿ ಧ್ಯೇಯವಾಕ್ಯದ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿ, ಅಧಿಕಾರಿಗಳು ಪ್ರಾಮಾಣಿಕತೆ, ಪಾರದರ್ಶಕತೆಯಿಂದ ಕೆಲಸ ನಿರ್ವಹಿಸಬೇಕು ಎಂದರು.