ಕಲ್ಯಾಣ ಕರ್ನಾಟಕ ಭಾಗದಲ್ಲಿ SSLC ಫಲಿತಾಂಶ 100ರಷ್ಟು ತರಲು ಈ ಭಾಗದ ಎಲ್ಲಾ ಜಿಲ್ಲೆಗಳಿಂದ ಮಾಸ್ಟರ್ ಟ್ರೇನಸ್೯ ಗಳಿಗೆ ತರಬೇತಿ ನೀಡಲಾಗುತ್ತಿದ್ದು, ಅವರು ಆಯಾ ಜಿಲ್ಲೆ ತಾಲ್ಲೂಕುಗಳಲ್ಲಿ ಹೋಗಿ ಶಿಕ್ಷಕರಿಗೆ ತರಬೇತಿ ನೀಡುತ್ತಾರೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ವಿ.ರಶ್ಮಿ ಮಹೇಶ ಹೇಳಿದರು. ಸೋಮವಾರ 1 ಗಂಟೆಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ರೂಪಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳ ಬುದ್ದಿಮಟ್ಟಕ್ಕೆ ಅನುಗುಣವಾಗಿ ತರಬೇತಿ ನೀಡಲಾಗುವುದು ಎಂದರು.