ನಾಳೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ : ಛಲವಾದಿ ನಾರಾಯಣಸ್ವಾಮಿ ಕೋಲಾರ: ಕೋರ್ಟಿನ ಆದೇಶದ ಮೇರೆಗೆ ನಾಳೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯಲಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯ ಕುರಿತು ಇಂದು ಕೋಲಾರದ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ಬಿಜೆಪಿ ನಿಯೋಗದೊಂದಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಹಳ ಕಡಿಮೆ ಅಂತರದಲ್ಲಿ ಅಭ್ಯರ್ಥಿ ಸೋಲು- ಗೆಲುವು ಆಗಿದೆ. ಆ ಸಂದರ್ಭದಲ್ಲಿ ಕೆಲವರ ಮಧ್ಯಪ್ರವೇಶದ ಕಾರಣದಿಂದ ನಮ್ಮ ಅಭ್ಯರ್ಥಿ ಸ