ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್ ರವರು ಸೋಮವಾರ ರಾತ್ರಿ 7 ಗಂಟೆ ಸುಮಾರಿಗೆ ಬಿ.ಎಂ.ಆರ್. ಡಿ.ಎ. ಕಛೇರಿ ಸಭಾಂಗಣದಲ್ಲಿ ನಡೆದ ವಿವಿಧ ವಿಭಾಗಗಳ ಇಲಾಖೆಯ ಮುಖ್ಯಸ್ಥರುಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಎಲ್ಲಾ ವಿಭಾಗಗಳ ವ್ಯಾಪ್ತಿಯಲ್ಲಿ ಕನಿಷ್ಠ 2 ರಸ್ತೆಗಳನ್ನು ಆಯ್ಕೆ ಮಾಡಿಕೊಂಡು ಪ್ರತಿ ತಿಂಗಳು ಕೇಂದ್ರ ನಗರ ಪಾಲಿಕೆಯ ಕನಿಷ್ಠ 10 ರಸ್ತೆಗಳಲ್ಲಿ ಪ್ರತಿ ರಸ್ತೆಯಲ್ಲಿ 5 ಕೀ. ಮೀ ವಿಸ್ತೀರ್ಣದಲ್ಲಿ ರಸ್ತೆಯ ಅಕ್ಕ ಪಕ್ಕದಲ್ಲಿ, ರಸ್ತೆಯ ವಿಭಜಕಗಳಲ್ಲಿ ಸಸಿಗಳನ್ನು ನೆಟ್ಟು ಹಸಿರೀಕರಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.