ಚಿಂತಾಮಣಿ ತಾಲೂಕಿನ ಮುರುಗಮಲ್ಲ ಹೋಬಳಿಯ ನಾರಮಾಕಲಹಳ್ಳಿ ಸರ್ವೇ ನಂಬರ್ 23 ರಲ್ಲಿ ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಸೇರಿದ ಜಮೀನಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸರ್ವೇಗೆ ಇಂದು ಬಂದಿದ್ದರು.ಈ ಜಮೀನುಗಳ ತಂಟೆಗೆ ಬಂದರೆ ಸುಮ್ಮನಿರುವುದಿಲ್ಲ. ನಿಮ್ಮ ಅರಣ್ಯ ಇಲಾಖೆಗೆ ಸೇರಿದ ಜಮೀನು ನಮಗೆ ಬೇಡ. ರೈತರ ಒಂದಿಂಚು ಜಾಗವೂ ಬಿಟ್ಟುಕೊಡುವುದಿಲ್ಲ, ರೈತರಿಗೆ ಮೋಸ ಮಾಡಬಾರದು ಎಂದು ಎಚ್ಚರಿಕೆ ನೀಡಿ, ಸರ್ವೆ ಕಾರ್ಯ ಸ್ಥಗಿತಗೊಳಿಸಿದರು. ಈ ಸಂದರ್ಭದಲ್ಲಿ ರೈತ ಸಂಘದ ಅಧ್ಯಕ್ಷ ರಘುನಾಥ ರೆಡ್ಡಿ, ಜಾನಪದ ಗಾಯಕ ಮುನಿರೆಡ್ಡಿ ಮತ್ತಿತರರು ಇದ್ದರು.