ಚಾಮರಾಜನಗರ: ಚಾಮರಾಜನಗರ ದಸರಾ ನಾಶಪಡಿಸಬೇಡಿ : ನಗರದಲ್ಲಿ ಕನ್ನಡಪರ ಹೋರಾಟಗಾರ ಚಾ.ರಂ. ಶ್ರೀನಿವಾಸ್ ಗೌಡ
ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಕನ್ನಡ ಮಹಾಸಭಾ ಅಧ್ಯಕ್ಷ ಚಾ.ರಂ.ಶ್ರೀನಿವಾಸ್ ಗೌಡ ಮಾತನಾಡಿ 2013 ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಚಾಮರಾಜನಗರದಲ್ಲಿ ದಸರಾ ಆಚರಣೆಗೆ ಮುಂದಾದರು, ಆದರೆ ಈ ಬಾರಿ ದಸರಾ ಆಚರಣೆ ಮಾಡುವುದಿಲ್ಲ ಎಂದು ಹೇಳಿರುವುದು ಸರಿಯಲ್ಲ. ಸಿದ್ದರಾಮಯ್ಯ ಅವರೇ ಹುಟ್ಟುಹಾಕಿದ ಚಾಮರಾಜನಗರ ದಸರಾ ಆಚರಣೆಯನ್ನು ಅವರೇ ನಾಶಪಡಿಸಲು ಮುಂದಾಗಿರುವುದು ಸರಿಯಲ್ಲ, ಅನುದಾನ ಕೊರತೆ ಇದ್ದರೆ ಎರಡು ದಿನಗಳಾದರೂ ದಸರಾ ಆಚರಣೆ ಮಾಡಬೇಕೆಂದರು.