ಶ್ರೀನಿವಾಸಪುರಕ್ಕೆ ಮಾವಿಗೆ ವಿಶೇಷ ಮಾರುಕಟ್ಟೆ ಹಾಗೂ ಪಲ್ಪ್ ಫ್ಯಾಕ್ಟರಿ ತರುವ ನಿಟ್ಟಿನಲ್ಲಿ ಶ್ರಮಿಸುವೆ: ಪಟ್ಟಣದಲ್ಲಿ ಮುದ್ದು ಗಂಗಾಧರ್ ಮಾವು ಬೆಳೆಗಾರರ ನೆರವಿಗೆ ಧಾವಿಸಿರುವ ರಾಜ್ಯ ಸರ್ಕಾರವು ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಒಟ್ಟು ₹40 ಕೋಟಿ 49 ಲಕ್ಷ ಹಣವನ್ನು ಬಿಡುಗಡೆ ಮಾಡಿದೆ ಎಂದು ಮಾವು ಮಂಡಳಿ ಅಧ್ಯಕ್ಷರಾದ ಮುದ್ದುಗಂಗಾಧರ್ ಅವರು ತಿಳಿಸಿದ್ದಾರೆ. ಶ್ರೀನಿವಾಸಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸಂಜೆ 5 ಗಂಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅನುದಾನವನ್ನು ಕಳೆದ ವರ್ಷ ಬೆಲೆ ಕುಸಿತದಿಂದ ನಷ್ಟಕ್ಕೊಳಗಾದ ಮಾವು ರೈತರಿಗೆ ವಿತರಿಸಲಾಗಿದ್ದು, ಪ್ರತಿ ಕ್ವಿಂಟಾಲ್ಗೆ ₹440 ರಂತೆ ನೀಡಲಾ