ತುಂಗಭದ್ರಾ ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದರೂ ರೈತರ ಎರಡನೇ ಬೆಳೆಗೆ ನೀರು ಹರಿಸಲು ಅವಕಾಶವಿದ್ದರೂ, ಗೇಟ್ಗಳ ದುರಸ್ತಿ ನೆಪ ಹೇಳುತ್ತಿದೆ. ಸರ್ಕಾರ ಎರಡನೇ ಬೆಳೆಗೆ ನೀರು ನೀಡದಿದ್ದರೆ ನ.5ರಿಂದ ನಾಲ್ಕು ಜಿಲ್ಲೆಗಳಲ್ಲಿ ರಸ್ತೆ ತಡೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಮಾಜಿ ಸಚಿವ ವೆಂಕಟರಾವ್ ನಾಡಗೌಡ ಎಚ್ಚರಿಕೆ ನೀಡಿದರು. ಮಾಧ್ಯಮ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ತುಂಗಭದ್ರ ಡ್ಯಾಂನ 36 ಗೇಟ್ಗಳ ಹಳೆದ್ದಾಗಿದ್ದು, ಇವುಗಳನ್ನು ಬದಲಾವಣೆ ಮಾಡುವ ಕಾರ್ಯ ನಡೆಯುತ್ತಿರುವ ಹಿನ್ನಲೆಯಲ್ಲಿ ನೀರು ಕೊಡಲು ಆಗದು ಎಂಬ ಕುಂಟುನೆಪ ಹೇಳುತ್ತಿದ್ದಾರೆ ಎಂದರು.