ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ನೌಕರರು,ಶಿಕ್ಷಕರ ಸಮಸ್ಯೆಗಳಿಗೆ ಸೇತುವೆಯಾಗಿ ಕೆಲಸ ಮಾಡುವಂತಾಗಲಿ ; ರಾಜ್ಯಾಧ್ಯಕ್ಷ ಎಸ್.ಚೌಡಪ್ಪ ಕೋಲಾರ : ನೈತಿಕ ನೆಲೆಗಟ್ಟಿನಲ್ಲಿ ಗುರಿ ಸಾಧನೆಗಾಗಿ ಸಂಘದಲ್ಲಿ ಬದ್ಧತೆ ಅಗತ್ಯವಿದೆ ತಮ್ಮ ಕಾರ್ಯವ್ಯಾಪ್ತಿಯಲ್ಲಿ ನೌಕರ ಹಾಗೂ ಶಿಕ್ಷಕರ ಸಮಸ್ಯೆಗಳಿಗೆ ಸಂಘ ಸ್ಪಂದಿಸುವ ಸೇತುವೆಯಾಗಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಸ್ ಚೌಡಪ್ಪ ಅಭಿಪ್ರಾಯಪಟ್ಟರು. ಕೋಲಾರದ ಮೆಥೋಡಿಸ್ಟ್ ಶಾಲೆಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಹಾಗೂ ತಾಲೂಕು ಅಧ್ಯಕ್ಷರು ಪದಾಧಿಕಾರಿಗಳ ಸಭೆಯ ನೇತೃತ್ವ ವಹಿಸಿ ಮಾತನಾಡಿದರು. ಸಂಘ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ಕಾರ್ಯ ಚಟುವಟಿ