ಶಿರಸಿ: ಬನವಾಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ
ಬನವಾಸಿಯ ನಾಮದೇವ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಕೆ.ಪಿ.ಸಿ.ಸಿ ಕಾರ್ಯದರ್ಶಿ ಹಾಗೂ ಕ್ಷೇತ್ರ ಉಸ್ತುವಾರಿ ರಾಬರ್ಟ್ ದದ್ದಾಪುರಿ ಅವರ ಅಧ್ಯಕ್ಷತೆಯಲ್ಲಿ ಬನವಾಸಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭವು ಶುಕ್ರವಾರ 3 ಕ್ಕೆ ನಡೆಯಿತು. ನಿಕಟಪೂರ್ವ ಅಧ್ಯಕ್ಷರಾದ ಸಿ.ಎಫ್.ನಾಯ್ಕ ಅವರು ನೂತನ ಅಧ್ಯಕ್ಷರಾದ ಗಣಪತಿ ನಾಯ್ಕ ಅವರಿಗೆ ಪಕ್ಷದ ಧ್ವಜವನ್ನು ನೀಡುವ ಮೂಲಕವಾಗಿ ಅಧಿಕಾರವನ್ನು ಹಸ್ತಾಂತರಿಸಿರು. ಕೆ.ಪಿ.ಸಿ.ಸಿ ಕಾರ್ಯದರ್ಶಿ ರಾಬರ್ಟ್ ದದ್ದಾಪುರಿ,ಮಾಜಿ ಶಾಸಕರಾದ ವಿ.ಎಸ್.ಪಾಟೀಲ್, ಕೆ.ಪಿ.ಸಿ.ಸಿ ಸದಸ್ಯರಾದ ವಿವೇಕ್ ಹೆಬ್ಬಾರ್ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷರಾದ ಬಸವರಾಜ ದೊಡ್ಮನಿ ಇದ್ದರು.