ಬೆಂಗಳೂರು ದಕ್ಷಿಣ: ತಟ್ಟಗುಪ್ಪೆಯ ಚಿಕ್ಕಲಿಂಗಶಾಸ್ತ್ರಿ ಕೆರೆ ಅಭಿವೃದ್ಧಿಗೆ ಶಾಸಕ ಸೋಮಶೇಖರ್ ಭೂಮಿ ಪೂಜೆ
ಯಶವಂತಪುರ ವಿಧಾನಸಭಾ ಕ್ಷೇತ್ರದ ತರಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಟ್ಟಗುಪ್ಪೆ ಗ್ರಾಮದ ಚಿಕ್ಕಲಿಂಗ ಶಾಸ್ತ್ರಿ ಕೆರೆಯನ್ನು 3 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಇಂದು ಚಾಲನೆ ನೀಡಲಾಗಿದೆ, ಶಾಸಕರಾದ ಸೋಮಶೇಖರ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಸಮ್ಮುಖದಲ್ಲಿ ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಗ್ರಾಮದ ಸುತ್ತಮುತ್ತ ಅಂತರ್ಜಲ ಮಟ್ಟವನ್ನು ಸುಧಾರಿಸುವ ಉದ್ದೇಶದಿಂದ ಸಣ್ಣ ನೀರಾವರಿ ಇಲಾಖೆ ವತಿಯಿಂದ ಕೆರೆಯನ್ನು ಅಭಿವೃದ್ಧಿಪಡಿಸಲು ಇಂದು ಚಾಲನೆ ನೀಡಲಾಗಿದೆ.