ದಾಂಡೇಲಿ: ದೇಶದ 50 ಕೋಟಿ ಕಾರ್ಮಿಕರ ಮರಣ ಶಾಸನ ಬರೆಯಲು ಹೊರಟಿರುವ ಕೇಂದ್ರ ಸರ್ಕಾರದ ನಾಲ್ಕು ನೂತನ ಕಾರ್ಮಿಕ ಕಾನೂನುಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಹೋರಾಟ ಸಮಿತಿಯು ಪಟೇಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ನಂತರ ನೂತನ ನಾಲ್ಕು ಕಾಯಿದೆ ಹಿಂಪಡೆಯಲು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಅನುಪಸ್ಥಿತಿಯಲ್ಲಿ ಆಹಾರ ನಿರೀಕ್ಷಕ ಗೋಪಿ ಚವ್ವಾಣ್ ಅವರಿಗೆ ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಸಲ್ಲಿಸಲಾಯ್ತು.