ಜಾಗತಿಕ ಲಿಂಗಾಯತ ಮಹಾಸಭೆಯು ಮಹಾರಾಷ್ಟ್ರದ ಕನ್ನೇರಿ ಮಠದ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗಾಯತ ಮಠಾಧೀಶರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ, ಅವರಿಗೆ ಧಾರವಾಡ ಜಿಲ್ಲೆಯ ಪ್ರವೇಶವನ್ನು ನಿಷೇಧಿಸಲು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಜಾಗತಿಕ ಲಿಂಗಾಯತ ಮಹಾಸಭಾ ಕಾರ್ಯದರ್ಶಿ ಬಸವಂತಪ್ಪ ತೋಟದ ಅವರು ಗುರುವಾರ ನಗರದಲ್ಲಿ ಮಾತನಾಡಿ, ನವೆಂಬರ್ 7 ರಂದು ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್