ಜೋಯಿಡಾ : ನಾವು ನೀವೆಲ್ಲರೂ ನೆಮ್ಮದಿಯ ಸಂತೃಪ್ತಿಯ ಜೀವನವನ್ನು ನಡೆಸುತ್ತಿದ್ದೇವೆ ಎಂದಾದರೆ ಅದಕ್ಕೆ ಕಾರಣ ಅರಣ್ಯ ಮತ್ತು ವನ್ಯಜೀವಿಗಳು. ಪರಿಸರವನ್ನು ಸಮತೋಲನದಲ್ಲಿ ಅರಣ್ಯ ಮತ್ತು ವನ್ಯಜೀವಿಗಳ ಪಾತ್ರ ಬಹುಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕೆಂದು ಸಿಐಡಿ ಪೊಲೀಸ್ ಅರಣ್ಯ ಘಟಕದ ಪಿಎಸ್ಐ ಯಲ್ಲಪ್ಪ.ಎಸ್ ಅವರು ಕರೆ ನೀಡಿದರು. ಅವರು ಸೋಮವಾರ ಮಧ್ಯಾಹ್ನ 3:00 ಗಂಟೆ ಸುಮಾರಿಗೆ ಜೋಯಿಡಾ ತಾಲೂಕಿನ ಬೈಲುಪಾರಿನ ಸ.ಹಿ.ಪ್ರಾ.ಶಾಲೆಯಲ್ಲಿ ಸಿಐಡಿ ಪೊಲೀಸ್ ಅರಣ್ಯ ಘಟಕದ ವತಿಯಿಂದ ಪರಿಸರ ಸಂರಕ್ಷಣೆ ಮತ್ತು ವನ್ಯಜೀವಿ ಅಪರಾಧ ತಡೆ ಮಾಸಾಚರಣೆಯ ಪ್ರಯುಕ್ತ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.