ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕರ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡುವಂತೆ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಡಿಯೂರು ಉಪವಿಭಾಗ ವ್ಯಾಪ್ತಿಯಲ್ಲಿ ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಪಶ್ಚಿಮ ಜಿಬಿಎ ಕಚೇರಿಯಲ್ಲಿ ನಾಗರಿಕರಿಗೆ ಮೂಲಸೌಕರ್ಯ ಹಾಗೂ ನೀಡುತ್ತಿರುವ ಸೇವೆಗಳ ಸ್ಥಿತಿಗತಿಗಳನ್ನು ಪರಿಶೀಲಿಸುವ ವೇಳೆ, ಪೌರಕಾರ್ಮಿಕರ ಮಸ್ಟರಿಂಗ್ ಸೆಂಟರ್ ಗೆ ಭೇಟಿ ನೀಡಿ ಅವರೊಂದಿಗೆ ಸಂವಾದ ನಡೆಸಿ ಅವರ ಅಹವಾಲುಗಳನ್ನು ಖುದ್ದಾಗಿ ಆಲಿಸಿದರು. ಬಳಿಕ ಎಲ್ಲಾ ಪೌರಕಾರ್ಮಿಕರಿಗೆ ಅಗತ್ಯ ಸುರಕ್ಷತಾ ಸಾಮಗ್ರಿಗಳನ್ನು ಬಳಸಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.