ಶಿವಮೊಗ್ಗ: ಸ್ವಚ್ಛತಾ ವಾಹಿನಿ ನೌಕರರಿಗೆ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನೀಡಿ ಎಂದು ನಗರದಲ್ಲಿ ಸಿಇಓ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ
ತರಬೇತಿ ಪಡೆದ ಸ್ವಚ್ಛತಾ ವಾಹಿನಿ ನೌಕರರಿಗೆ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನೀಡುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ,ರಾಜ್ಯ ಗ್ರಾಮ ಪಂಚಾಯಿತಿ ಸ್ವಚ್ಛತಾ ವಾಹಿನಿ ಆಟೋ ಚಾಲಕರು ಹಾಗೂ ಸಹಾಯಕಿರ ಸಂಘದ ಜಿಲ್ಲಾ ಶಾಖೆ ವತಿಯಿಂದ ಸೋಮುವಾರ ಶಿವಮೊಗ್ಗದ ಗಾಂಧಿ ಪಾರ್ಕ್ ನಿಂದ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಾಯಿತು, ಬಳಿಕ ಶಿವಮೊಗ್ಗ ನಗರದಲ್ಲಿರುವ ಜಿಲ್ಲಾ ಪಂಚಾಯತ್ ಮುಂಬಾಗ ಧರಣಿ ಸತ್ಯಾಗ್ರಹ ನಡೆಸಿದಂತಹ ಪ್ರತಿಭಟನಾಕಾರರು ಸಿಇಓ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.