ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತರಾದ ಕೆ ಎನ್ ರಮೇಶ್ ರವರು ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಸರ್ಕಾರದ ಆದೇಶದಂತೆ ನೇಮಕಾತಿ ಹೊಂದಿರುವ ಜಯನಗರ ವಿಭಾಗದ ಪೌರ ಕಾರ್ಮಿಕರುಗಳಿಗೆ ಹೆಲ್ತ್ ಕಾರ್ಡ್ ಗಳನ್ನು ವಿತರಿಸಿದರು. ಈ ಹೆಲ್ತ್ ಕಾರ್ಡ್ಗಳಿಂದ ಪೌರಕಾರ್ಮಿಕರು ಹಾಗೂ ಅವರ ಕೌಟುಂಬಿಕ ಅವಲಂಬಿತರು ಪಾಲಿಕೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವ ಆಸ್ಪತ್ರೆಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಪಡೆಯಬಹುದಾಗಿದೆ.