ಕಾಡು ಪ್ರಾಣಿ ದಾಳಿಗೆ ಗೊಲ್ಲರಕಾಲೋನಿ ಮಹಿಳೆ ಸಾವು
Manchenahalli, Chikkaballapur | Apr 25, 2025
ಕಾಡು ಪ್ರಾಣಿ ದಾಳಿಗೆ ಮಹಿಳೆ ಸಾವನ್ನಪ್ಪಿರುವ ಘಟನೆಯೊಂದು ಚಿಕ್ಕಬಳ್ಳಾಪುರ ಜಿಲ್ಲೆ ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗೊಲ್ಲರಕಾಲೋನಿ ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಹುಲ್ಲು ತರಲು ಹೋದ ವೇಳೆ ಚಿರತೆ ಅಥವ ಕರಡಿ ದಾಳಿ ಮಾಡಿರಬಹುದು ಎಂದು ಶಂಕಿಸಲಾಗಿದೆ.ಮೃತ ಮಹಿಳೆಯನ್ನು 60 ವರ್ಷದ ಪ್ರಮೀಳಮ್ಮ ಎಂದು ತಿಳಿದು ಬಂದಿದೆ. ಇನ್ನೂ ಸುಮಾರು 100 ಮೀಟರ್ ಎಳೆದುಕೊಂಡು ಹೋಗಿದೆ ಎನ್ನಲಾಗಿದೆ. ಘಟನೆವೆ ಸಂಬಂಧಿಸಿದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಮಂಚೇನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಘಟನೆಗೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.