ಬ್ರೇಕ್ ಫೇಲ್ ಆದ ಕೆಕೆಆರ್ಟಿಸಿ ಬಸ್ ಮರಕ್ಕೆ ಡಿಕ್ಕಿ : ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು ಬೀದರ್ : ಉದಗಿರದಿಂದ ಭಾಲ್ಕಿ ಮಾರ್ಗವಾಗಿ ಬೀದರ್ ಕಡೆಗೆ ಹೊರಟಿದ್ದ ಕೆಕೆಆರ್ಟಿಸಿ ಬಸ್ಸೊಂದು ಇಂದು ಸಾಯಂಕಾಲ ಭಾಲ್ಕಿ ತಾಲೂಕಿನ ಕೋನ ಮೇಳಕುಂದಾ ಗ್ರಾಮದ ಹತ್ತಿರ ಅಪಘಾತಕ್ಕೊಳಗಾಗಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ನ ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕ ನಿಯಂತ್ರಣ ಕಳೆದುಕೊಂಡಿದ್ದರು. ಆದ್ದರಿಂದ ಬಸ್ ರಸ್ತೆ ಬದಿ ಇರುವ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ನಲ್ಲಿ ಸುಮಾರು 40 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು