ಮಾನ್ವಿ: ತಾಲೂಕಿನ ವಿವಿಧ ಗ್ರಾಮಗಳ ರೈತರ ಬೆಳೆ ಹಾನಿ ಪ್ರದೇಶಕ್ಕೆ ಮಾಜಿ ಶಾಸಕ ರಾಜ್ಯಾ ವೆಂಕಟಪ್ಪ ನಾಯಕ ಭೇಟಿ ನೀಡಿ ವೀಕ್ಷಣೆ
Manvi, Raichur | Oct 1, 2025 ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಹಲವು ಗ್ರಾಮಗಳಲ್ಲಿ ನಿರಂತರ ಸುರಿದ ಮಳೆಯಿಂದಾಗಿ ರೈತರ ಬೆಳೆ ಹಾನಿಯಾಗಿರುವ ಪ್ರದೇಶಕ್ಕೆ ಬುಧವಾರ ಮಧ್ಯಾಹ್ನ ಮಾನ್ವಿಯ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಭೇಟಿ ನೀಡಿ ಬೆಳೆ ಹಾನಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಅನೇಕ ಜನ ರೈತರು ಕೂಡ ಭೇಟಿ ಮಾಡಿ ತಮಗೆ ಪರಿಹಾರವನ್ನು ಕೊಡಿಸುವಂತೆ ವಿನಂತಿಸಿದರು. ಕೃಷಿ ಸಚಿವರಿಗೆ ಬೆಳೆ ಹಾನಿಯ ಕುರಿತು ಮಾಹಿತಿಯನ್ನು ನೀಡಿ ಪರಿಹಾರ ಕೊಡಿಸಲು ಪ್ರಯತ್ನ ಮಾಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಅನೇಕ ಜನ ರೈತ ಮುಖಂಡರು ಹಾಗೂ ರಾಜಾ ವೆಂಕಟಪ್ಪ ನಾಯಕ ಅವರ ಬೆಂಬಲಿಗರು ಕೂಡ ಭಾಗವಹಿಸಿದ್ದರು.