ಚಿತ್ರದುರ್ಗದ ಓಬವ್ವ ವೃತ್ತದಲ್ಲಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಅಂಗವಾಗಿ ದೀಪ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬುದವಾರ ಸಂಜೆ ಏಳು ಗಂಟೆಗೆ ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಹುಟ್ಟು ಹಬ್ಬದ ಪ್ರಯುಕ್ತ ಜಿಲ್ಲಾ ಬಿಜೆಪಿ ವತಿಯಿಂದ ಅಟಲ್ ದೀಪ ನಮನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಬಿಜೆಪಿ ಅಧ್ಯಕ್ಷರಾದ ಕೆಟಿ ಕುಮಾರಸ್ವಾಮಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ದೀಪಗಳನ್ನ ಬೆಳಗಿಸುವ ಮೂಲಕ ಜನ್ಮದಿನವನ್ನ ಆಚರಣೆ ಮಾಡಿದ್ದಾರೆ