ಬೆಂಗಳೂರು: ಹಣ ಕೊಡದಿದ್ದಕ್ಕೆ ಮಲಗಿದ್ದವನ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಜೆಸಿನಗರದ ಸಾಹಿಲ್ ಪಾಷಾ (22) ಎಂಬ ಅಪರಿಚಿತ ವ್ಯಕ್ತಿಯನ್ನು ಹಣ ಕೊಡಲಿಲ್ಲವೆಂಬ ಕಾರಣಕ್ಕೆ ಕಲ್ಲು ಎತ್ತಿಹಾಕಿ ಕೊಲೆಗೈದಿದ್ದ ಮೆಕ್ಯಾನಿಕ್ ಒಬ್ಬನನ್ನು ಸಿಸಿ ಕ್ಯಾಮೆರಾ ಸಹಾಯದಿಂದ ಕೆಲವೇ ಗಂಟೆಗಳಲ್ಲಿ ಗುರುವಾರ ರಾತ್ರಿ 8 ಗಂಟೆಯಲ್ಲಿ ಬಂಧಿಸಲಾಗಿದೆ. ರಾತ್ರಿ ವೇಳೆ ಎಲ್ಲೆಂದರಲ್ಲಿ ಮಲಗುತ್ತಿದ್ದ ವ್ಯಕ್ತಿಯ ಮೇಲೆ ಈ ಕೃತ್ಯ ನಡೆದಿದೆ.