ದುನಿಯಾ ವಿಜಯ್ ನಾಯಕನಾಗಿ ನಟಿಸಿರುವ ಲ್ಯಾಂಡ್ಲಾರ್ಡ್ ಸಿನಿಮಾ ಶುಕ್ರವಾರವಷ್ಟೇ ಬಿಡುಗಡೆ ಆಗಿದೆ. ಇದೀಗ ಇದೇ ಸಿನಿಮಾವನ್ನು ವೀಕ್ಷಣೆ ಮಾಡುವುದಾಗಿ, ಸಿಎಂ ಸಿದ್ದರಾಮಯ್ಯ ಶನಿವಾರ ಮಧ್ಯಾಹ್ನ ಹೇಳಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣದಲ್ಲಿ ಭೇಟಿ ನೀಡಿದ ಚಿತ್ರತಂಡ, ಸಿನಿಮಾ ವೀಕ್ಷಣೆ ಬಗ್ಗೆ ಮನವಿ ಮಾಡಿತು. ಬಳಿಕ ಮಾತನಾಡಿದ ಸಿಎಂ, ಈ ಚಿತ್ರದ ಮೂಲಕ ಸಮಾಜದಲ್ಲಿನ ಜಾತಿ ಅಸಮಾನತೆ ಮತ್ತು ಸಾಂವಿಧಾನಿಕ ಮೌಲ್ಯಗಳ ಮೇಲೆ ಬೆಳಕು ಚೆಲ್ಲುವಂತಹ ಪ್ರಯತ್ನವನ್ನು ಚಿತ್ರತಂಡ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಕಳಕಳಿಯ ಕಥಾಹಂದರದ ಸಿನಿಮಾಗಳು ಮೂಡಿಬರುತ್ತಿರುವುದು ಅಪರೂಪ. ನಾನೂ ಖಂಡಿತವಾಗಿ ಚಿತ್ರಮಂದಿರಕ್ಕೆ ತೆರಳಿ ಈ ಸಿನಿಮಾ ವೀಕ್ಷಿಸುತ್ತೇನೆ ಎಂದರು.