ಚಿತ್ರದುರ್ಗದ ಮುರುಘಾ ಮಠದಲ್ಲಿ 10ನೇ ದಿನದ ವಚನ ಕಾರ್ತೀಕ ಮಹೋತ್ಸವ ಹಮ್ಮಿಕೊಳ್ಳಲಾಗಿತ್ತು. ಬಾನುವಾರ ಸಂಜೆ 7 ಗಂಟೆಗೆ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಕರ್ತ ಮುರಿಗೆಯ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಲೀಲಾ ವಿಶ್ರಾಂತಿ ಸನ್ನಿಧಾನದಲ್ಲಿ 33 ದಿನಗಳ ಕಾಲ ಏರ್ಪಡಿಸಿರುವ ವಚನ ಕಾರ್ತೀಕ ಮಹೋತ್ಸವದ 10ನೇ ದಿನದ ಕಾರ್ಯಕ್ರಮದಲ್ಲಿ ಶಿವಶರಣೆಯರಾದ ಸಿದ್ಧಬುದ್ಧಯ್ಯಗಳ ಪುಣ್ಯಸ್ತ್ರೀ ಕಾಳವ್ವ ಮತ್ತು ರಾಯಸದ ಮಂಚಣ್ಣಗಳ ಪುಣ್ಯಸ್ತ್ರೀ ರಾಯಮ್ಮನವರ ಸ್ಮರಣೆ ಹಮ್ಮಿಕೊಳ್ಳಲಾಗಿತ್ತು.