ಕಲಬುರಗಿ : ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಗೌನಹಳ್ಳಿ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸೇರಿದಂತೆ ಮೂವರು ದುರ್ಮರಣಕ್ಕಿಡಾದ ಘಟನೆಗೆ ಸಂಬಂಧಿಸಿದಂತೆ, ಎದುರಿಗೆ ಬಂದ ಬೈಕ್ ಸವಾರನಿಗೆ ಡಿಕ್ಕಿ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಬಿದ್ದು ಪಲ್ಟಿಯಾಗಿದೆ.. ಈ ವೇಳೆ ಇನ್ನೋವಾ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಶಂಕರ್ ಬೀಳಗಿ ಮತ್ತು ಈರಣ್ಣ ಬೀಳಗಿ ಸ್ಥಳದಲ್ಲೆ ಮೃತಪಟ್ಟರೆ, ಮಹಾಂತೇಶ ಬೀಳಗಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.