ಹುಬ್ಬಳ್ಳಿಯ ಬೈಲಪ್ಪನವರ ನಗರದಲ್ಲಿರುವ ಸುಪ್ರಸಿದ್ಧ ಶ್ರೀ ಗಣೇಶನ ದೇವಸ್ಥಾನದಲ್ಲಿ ಕಾರ್ತಿಕೋತ್ಸವದ ಅಂಗವಾಗಿ ಜರುಗಿದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಭಾಗವಹಿಸಿ, ವಿಘ್ನ ವಿನಾಶಕನ ದರ್ಶನ ಪಡೆದುಕೊಂಡರು. ಈ ಸಂದರ್ಭದಲ್ಲಿ ಪಾಲಿಕೆಯ ಸದಸ್ಯರಾದ ಶ್ರೀಮತಿ ರೂಪಾ ಶೆಟ್ಟಿ,ದೇವಸ್ಥಾನ ಕಮೀಟಿ ಅಧ್ಯಕ್ಷರಾದ ಚನ್ನಬಸಣ್ಣ ಬೈಲಪ್ಪನವರ, ಪ್ರಮುಖರಾದ ಸದಾಶಿವ ಹುಬ್ಬಳ್ಳಿ, ಶಶಿಶೇಖರ ಡಂಗನವರ, ಬಸವರಾಜ ಬೆಳಗಲಿ ಹಾಗೂ ಇತರರು ಉಪಸ್ಥಿತರಿದ್ದರು.