ದಾಂಡೇಲಿ: ಕನ್ನಡ ಸಾಹಿತ್ಯ ಪರಿಷತ್ತು ಇಂದು ನಾಲ್ಕು ಲಕ್ಷಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ಮಟ್ಟಿಗೆ ಬೆಳೆದಿರುವುದು ಕನ್ನಡಿಗರ ಅಭಿಮಾನಕ್ಕೆ ಸಾಕ್ಷಿಯಾಗಿದೆ ಎಂದು ಹಿರಿಯ ಸಾಹಿತಿ ಗೊ.ರು. ಚನ್ನಬಸಪ್ಪ ಹೇಳಿದರು. ಅವರು ನಗರದಲ್ಲಿ ಸೋಮವಾರ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾಹವಹಿಸಿ ಸಮಾರೋಪ ನುಡಿಗಳಲ್ಲಿ ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತು ಕೆಲ ಅವಧಿಯಲ್ಲಿ ವಿವಾದಗಳಿಗೆ ಒಳಗಾದರೂ, ಸದ್ಯ ಅದರ ಮೇಲಿನ ಕಳಂಕಗಳು ಶೀಘ್ರ ನಿವಾರಣೆಯಾಗಲಿ ಎಂಬ ಆಶಯ ವ್ಯಕ್ತಪಡಿಸಿದರು. ಒಂದು ಹಂತದಲ್ಲಿ ಸರ್ಕಾರದ ನಿಯಂತ್ರಣದಲ್ಲಿದ್ದ ಪರಿಷತ್ತು ಅನಂತರ ಸ್ವತಂತ್ರ ಸಂಸ್ಥೆಯಾಗಿ ಹೊರಹೊಮ್ಮಿದೆ ಎಂದರು.