ರಾಜ್ಯದ ಸ್ಲಂ ಜನರ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಅಧಿವೇಶನದ ಬಳಿಕ ಬೆಂಗಳೂರಿನಲ್ಲಿ ವಿಶೇಷ ಸಭೆ ಕರೆಯಲಾಗುವುದು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಭರವಸೆ ನೀಡಿದರು. ಬೆಳಗಾವಿಯ ಸುವರ್ಣ ಸೌಧದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ನಿಯೋಗ ರಾಯಚೂರು ಹಠಾತ್ ಆಗಿ ವಸತಿ ಸಚಿವರನ್ನು ಘೇರಾವ್ ಮಾಡಿ ಮನವಿ ಸಲ್ಲಿಸಿತು. ಈ ವೇಳೆ ಮಾತನಾಡಿದ ಸಚಿವರು, ರಾಯಚೂರು ಸೇರಿ ಇಡೀ ರಾಜ್ಯದಲ್ಲಿ 709 ಕೊಳಚೆ ಪ್ರದೇಶಗಳು ಖಾಸಗಿ ಮಾಲೀಕತ್ವದಲ್ಲಿದ್ದು, ಅವುಗಳನ್ನು ಸರ್ಕಾರದ ವಶಕ್ಕೆ ಪಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. ಖಾಸಗಿ ಕೊಳಚೆ ಪ್ರದೇಶಗಳನ್ನು ಘೋಷಿಸಲು ತೊಡಕಾಗಿರುವ ವಸತಿ ಇಲಾಖೆ ಸುತ್ತೋಲೆಯನ್ನು ಹಿಂಪಡೆಯುವ ಬಗ್ಗೆ ಸಹ ಸರ್ಕಾರ ಪರಿಶೀಲನೆ ನಡೆಸಲಿದೆ