ಮಾನವಿಕ ವಿಷಯಗಳ ಅಧ್ಯಯನದಿಂದ ಸಮಾಜದ ಬಹುತ್ವ ಅರಿವು ಸಾಧ್ಯ: ಡಾ.ಬರಗೂರು ರಾಮಚಂದ್ರಪ್ಪ ಕೃತಕ ಬುದ್ದಿಮತ್ತೆ, ಹೊಸ ತಂತ್ರಜ್ಞಾನಕ್ಕೆ ನಾವು ಹೆಚ್ಚು ಉತ್ತೇಜನ ನೀಡಿದರೆ ಮುಂದೊಂದು ದಿನ ಮನುಷ್ಯ ಸಂಬಂಧಗಳು ನಾಶವಾಗುವುದರಲ್ಲಿ ಸಂಶಯವಿಲ್ಲ. ಮಾನವಿಕ ವಿಷಯಗಳ ಅಧ್ಯಯನದಿಂದ ಸಮಾಜದ ಬಹುತ್ವ ಅರಿವು ಸಾಧ್ಯ ಎಂದು ಖ್ಯಾತ ಸಾಹಿತಿಗಳು ಹಾಗೂ ಚಲನಚಿತ್ರ ನಿರ್ದೇಶಕರಾದ ಡಾ.ಬರಗೂರು ರಾಮಚಂದ್ರಪ್ಪ ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯ ಮಾಸ್ತಿ ವೆಂಕಟೇಶ ಅಯ್ಯಂಗಾರ್ ವೇದಿಕೆಯಲ್ಲಿ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ ಹಾಗೂ ತೋಟಗಾರಿಕಾ ಮಹಾವಿಶ್ವವಿದ್ಯಾಲಯ, ಕೋಲಾರ ಇವರ ಸಹಯೋಗದ