ತುಮಕೂರು: ಸೋಶಿಯಲ್ ಮೀಡಿಯಾಗಳಲ್ಲಿ ಸುಳ್ಳು ಸುದ್ದಿ ಹರಡುವುದನ್ನ ನಿಯಂತ್ರಿಸಲು ಮುಂಬರುವ ಅಧಿವೇಶನದಲ್ಲಿ ನೂತನ ಕಾನೂನು ಜಾರಿ: ನಗರದಲ್ಲಿ ಸಚಿವ ಪರಮೇಶ್ವರ್
ಸೋಶಿಯಲ್ ಮೀಡಿಯಾಗಳಲ್ಲಿ ಸುಳ್ಳು ಸುದ್ದಿ ಹರಡುವುದನ್ನ ನಿಯಂತ್ರಿಸಲು ರಾಜ್ಯ ಸರ್ಕಾರ ಮುಂಬರುವ ಅಧಿವೇಶನದಲ್ಲಿ ನೂತನ ಕಾನೂನು ಜಾರಿಗೊಳಿಸಲಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.ತುಮಕೂರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಭಾನುವಾರ ಮಧ್ಯಾಹ್ನ 2.30 ರ ಸಮಯದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ಪತ್ರಿಕಾ ದಿನಾಚರಣೆ, ಕೃತಜ್ಞತಾ ಸಮಾರಂಭ, ವಾರ್ಷಿಕ ದತ್ತಿ ಪ್ರದಾನ ಸಮಾರಂಭ, ಹಿರಿಯ ಪತ್ರಕರ್ತರಿಗೆ ಸನ್ಮಾನ ಹಾಗೂ ಸರ್ವ ಸದಸ್ಯರ ವಾರ್ಷಿಕ ಸಭೆ ಉದ್ಘಾಟಿಸಿ ಮಾತನಾಡಿದರು.